Ravi Belagere Sahitya & Sanskritika Parishattu (R.)
ಖ್ಯಾತ ಲೇಖಕ, ಕಥೆಗಾರ, ಪತ್ರಕರ್ತ ಹಾಗೂ ಶಿಕ್ಷಣ ತಜ್ಞರಾಗಿದ್ದ ಶ್ರೀ ರವಿ ಬೆಳಗೆರೆಯವರ ಪತ್ನಿಯಾಗಿ ಒಂದು ಗಂಡು ಮಗುವಿನ ತಾಯಿಯಾಗಿದ್ದು, ರವಿ ಬೆಳಗೆರೆಯವರ ಭೌತಿಕ ನಿರ್ಗಮನದ ನಂತರ ಅಕ್ಷರಗಳಲ್ಲಿ ಸಮಾಧಾನವನ್ನು ಕಾಣುತ್ತಿರುವ ಶ್ರೀಮತಿ ಯಶೋಮತಿ ರವಿ ಬೆಳಗೆರೆ ಮೂಲತಃ ತುಮಕೂರು ಜಿಲ್ಲೆಯ ಚಿಕ್ಕಸಾರಂಗಿ ಗ್ರಾಮದವರು.
ಬಿಕಾಮ್ ಪದವಿಯ ಜೊತೆಗೆ ಇಂಟರ್ ನ್ಯಾಷನಲ್ ಗ್ರಾಜುಯೇಟ್ ಡಿಪ್ಲೊಮೋ ಇನ್ ಕೌನ್ಸಿಲಿಂಗ್ ಸ್ಕಿಲ್ಸ್ (IGDCS) ಡಿಪ್ಲೊಮೋ ಇನ್ ಬೊಟಿಕ್ ಮ್ಯಾನೇಜ್ ಮೆಂಟ್ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ್ದಾರೆ. ಅಕ್ಷರ ವಿನ್ಯಾಸಕಿ, ಪುಟ ವಿನ್ಯಾಸಕಿ, ಅಂಕಣಕಾರ್ತಿ, ಪ್ರಕಾಶಕಿ, ಲೇಖಕಿ, ರವಿ ಬೆಳಗೆರೆ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಷತ್ತಿನ ಪ್ರಧಾನ ಅಧ್ಯಕ್ಷೆ, ಹಾಗೂ ಅಕ್ಷರ ಲೋಕ ಮಾಸಪತ್ರಿಕೆಯ ಪ್ರಧಾನ ಸಂಪಾದಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಹಾಯ್ ಬೆಂಗಳೂರ್ ಕನ್ನಡ ವಾರಪತ್ರಿಕೆಯಲ್ಲಿ ಅಕ್ಷರ ವಿನ್ಯಾಸಕಿಯಾಗಿ ಆರಂಭಗೊಂಡ ಪತ್ರಿಕೋದ್ಯಮದ ಒಡನಾಟ ಕಂಪ್ಯೂಟರ್ ವಿಭಾಗದ ಮುಖ್ಯಸ್ಥೆಯಾಗಿ ವ್ಯವಸ್ಥಾಪಕ ನಿರ್ದೇಶಕಿಯಾಗಿ, ಬೆಳಗೆರೆ ಬುಕ್ಸ್ ಅಂಡ್ ಕಾಫಿ ಪುಸ್ತಕ ಮಳಿಗೆಯ ನಿರ್ವಾಹಕ ಮಾಲೀಕಳಾಗಿ ಸುಮಾರು ಇಪ್ಪತ್ನಾಲ್ಕು ವರ್ಷಗಳ ಕಾಲ ಸತತವಾಗಿ ಅಕ್ಷರ ಲೋಕದ ಒಡನಾಟದ ಅನುಭವದಿಂದ ಈಗ ಸ್ವತಂತ್ರವಾಗಿ ರವಿ ಬೆಳಗೆರೆ ಪ್ರಕಾಶನ ಸಂಸ್ಥೆಯನ್ನು ಸ್ಥಾಪಿಸಿ ಅದರ ಮೂಲಕ ಉತ್ತಮ ಕೃತಿಗಳನ್ನು ಹೊರತರುವ ಉದ್ದೇಶವನ್ನು ಹೊಂದಿದ್ದಾರೆ. ಹಾಗೂ ವಿಶ್ವವಾಣಿ ಪತ್ರಿಕೆಯಲ್ಲಿ ಎಂಬತ್ತು ಅಂಕಣಗಳನ್ನು ಬರೆಯುವ ಮೂಲಕ ಅಂಕಣಕಾರ್ತಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೇ, ರವಿ ಬೆಳಗೆರೆಯವರು ವಾಸವಿದ್ದ ಮನೆಯ ಒಂದು ಭಾಗವನ್ನು ಶಾಲೆಯಾಗಿ ಪರಿವರ್ತಿಸಿ ‘ರವಿ ಬೆಳಗೆರೆ ಎಜುಕೇಷನ್ ಟ್ರಸ್ಟ್’ ಮೂಲಕ ರೇಸ್ ಪ್ರೀ ಸ್ಕೂಲ್ ಅಂಡ್ ಡೇ ಕೇರ್ ಎಂಬ ಪ್ರೀಪ್ರೈಮರಿ ಶಾಲೆಯನ್ನು ಸ್ಥಾಪಿಸಿ ಪುಟ್ಟ ಮಕ್ಕಳಿಗೆ ವಿದ್ಯೆ ಕಲಿಸುವ ಕಲಿಸುವ ಕಾಯಕದಲ್ಲಿ ನಿರತರಾಗಿದ್ದಾರೆ
ರವಿ ಬೆಳಗೆರೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತು, ಸಮಾಜದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿರುವ ಒಂದು ಗೌರವಾನ್ವಿತ ಸಂಸ್ಥೆ. ಸಮಾಜಸೇವೆಯಲ್ಲಿ ತಮ್ಮದೇ ಆದ ವಿಶಿಷ್ಟ ಗುರುತನ್ನು ಮೂಡಿಸಿಕೊಂಡಿರುವ ಈ ಸಂಸ್ಥೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.
ರವಿ ಬೆಳಗೆರೆ ಪ್ರಕಾಶನ ಮತ್ತು ರವಿ ಬೆಳಗೆರೆ ಎಜುಕೇಶನ್ ಟ್ರಸ್ಟ್ ಮೂಲಕ ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರಗಳ ಅಭಿವೃದ್ಧಿಗೆ ಸಂಸ್ಥೆ ಕೈಜೋಡಿಸಿದೆ. ಯಶೋ ಗೆರೆ ಯೂಟ್ಯೂಬ್ ಚಾನೆಲ್ ಮೂಲಕ ಸಂಸ್ಥೆಯ ಚಟುವಟಿಕೆಗಳನ್ನು ಜನಪ್ರಿಯಗೊಳಿಸುವ ಪ್ರಯತ್ನ ಮೆಚ್ಚುಗೆಗೆ ಪಾತ್ರವಾಗಿದೆ.
ಸಮಾಜದ ಸರ್ವಾಂಗೀಣ ಅಭಿವೃದ್ಧಿಯೇ ರವಿ ಬೆಳಗೆರೆ ಸಂಸ್ಕೃತಿ ಪರಿಷತ್ತಿನ ಮುಖ್ಯ ಧ್ಯೇಯ. ಮುಂದಿನ ದಿನಗಳಲ್ಲಿ ಸಂಸ್ಥೆ ಇನ್ನಷ್ಟು ಹೊಸ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದ್ದು, ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ತನ್ನ ಕೊಡುಗೆಯನ್ನು ಮುಂದುವರಿಸಲಿದೆ.
"ಸಾಹಿತ್ಯದ ಮೂಲಕ ಸಮಾಜದ ಬದಲಾವಣೆ ಸಾಧ್ಯ" ಎಂಬುದು ರವಿ ಬೆಳಗೆರೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿನ ನಂಬಿಕೆ. ಈ ನಿಟ್ಟಿನಲ್ಲಿ ಪರಿಷತ್ತು ಹಲವಾರು ಸಾಹಿತ್ಯ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ. ಕವಿಗೋಷ್ಠಿಗಳು, ಕಥಾಕಾರರ ಸಮ್ಮೇಳನಗಳು, ಸಾಹಿತ್ಯ ಚರ್ಚಾ ವೇದಿಕೆಗಳು ಇದರ ಭಾಗವಾಗಿ ನಡೆಯುತ್ತವೆ.
ಸಾಹಿತಿಗಳು ಮತ್ತು ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪರಿಷತ್ತು ವಿವಿಧ ಸ್ಪರ್ಧೆಗಳು ಮತ್ತು ಪ್ರಶಸ್ತಿಗಳನ್ನು ನೀಡುತ್ತದೆ. ಉದಯೋನ್ಮುಖ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದು ಪರಿಷತ್ತಿನ ಮತ್ತೊಂದು ಗುರಿ.
ಸಾಂಸ್ಕೃತಿಕವಾಗಿ ಸಮೃದ್ಧವಾದ ನಮ್ಮ ದೇಶದಲ್ಲಿ, ವಿವಿಧ ಸಂಸ್ಕೃತಿಗಳು ಮತ್ತು ಪರಂಪರೆಗಳನ್ನು ಸಂರಕ್ಷಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ರವಿ ಬೆಳಗೆರೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ. ನೃತ್ಯ, ಸಂಗೀತ, ನಾಟಕ ಮೊದಲಾದ ಕಲಾ ಪ್ರಕಾರಗಳನ್ನು ಉತ್ತೇಜಿಸುವುದು ಇದರ ಉದ್ದೇಶ.
ಸಮಾಜದಲ್ಲಿನ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಮಾಜಸೇವೆಯೂ ಪರಿಷತ್ತಿನ ಒಂದು ಪ್ರಮುಖ ಚಟುವಟಿಕೆ. ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ ಮೊದಲಾದ ಕ್ಷೇತ್ರಗಳಲ್ಲಿ ಪರಿಷತ್ತು ತನ್ನ ಕೊಡುಗೆ ನೀಡುತ್ತಿದೆ.
ಈ ಎಲ್ಲಾ ಮಾಹಿತಿಯನ್ನು yashomati ravibelagere .comವೆಬ್ಸೈಟ್ ನಲ್ಲಿ ಸಂಪೂರ್ಣವಾಗಿ ತಿಳಿಯಬಹುದು.
Yashomathy Ravi Belagere
General Secretary
Srinivas Babu
Prabha m